ಆಪ್ತ ನ್ಯೂಸ್ ಚಿಕ್ಕನಗೋಡು:
]ಇಲ್ಲಿನ ಎನ್.ಎಸ್.ಎಸ್ (NSS) ಶಿಬಿರದಲ್ಲಿ ನಿನ್ನೆ *'ಅಕ್ಷರ ಚಿಂತನ ಬಳಗ'*ದ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದು ಬಳಗದ ಮೊದಲ ಕಾರ್ಯಕ್ರಮವಾಗಿದ್ದು, ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಪ್ರಮುಖವಾಗಿ *'ಅಕ್ಷರ ಚಿಂತನ'*ದ ಧ್ಯೇಯೋದ್ದೇಶಗಳ ಬಗ್ಗೆ ಅರಿವು ಮೂಡಿಸಲಾಯಿತು. ಇಂದಿನ ಯುವ ತರುಣ-ತರುಣಿಯರಿಗೆ ಅಗತ್ಯವಿರುವ ವ್ಯಕ್ತಿತ್ವ ವಿಕಸನ ಮತ್ತು ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಯುವಜನತೆಯನ್ನು ಸರಿದಾರಿಯಲ್ಲಿ ಮುನ್ನಡೆಸಲು ಮತ್ತು ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಯಿತು.
ಬಳಗದ ಸದಸ್ಯರಾದ ಗಣೇಶ್ ಮತ್ತು ಪ್ರಿಯಾ ಅವರು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಎನ್ಎಸ್ಎಸ್ ಸಂಯೋಜನಾಧಿಕಾರಿಗಳು ಹಾಗೂ ಪ್ರಾಧ್ಯಾಪಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಮ್ಮ ವಿಚಾರಪೂರ್ಣ ಮಾತುಗಳ ಮೂಲಕ ಶಿಬಿರಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಗ್ರಾಮಸ್ಥರು ಹಾಗೂ ಎನ್.ಎಸ್.ಎಸ್ ಶಿಬಿರಾರ್ಥಿಗಳು ಕಾರ್ಯಕ್ರಮದ ಲಾಭ ಪಡೆದರು.