ಇಂದಿನಿಂದ ಆಗಸ್ಟ್ 5ರವರೆಗೆ ಶ್ರೀ ರಾಮನಾಥೇಶ್ವರ ದೇವಸ್ಥಾನದಲ್ಲಿ ಐದು ದಿನಗಳ ವೇದಪಾರಾಯಣ
ಆಪ್ತ ನ್ಯೂಸ್ ಯಲ್ಲಾಪುರ:
ತಾಲೂಕಿನ ಯಡಳ್ಳಿ–ಮಂಚಿಕೇರಿಯಲ್ಲಿರುವ ಶ್ರೀ ರಾಮನಾಥೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಐದು ದಿನಗಳ ವೇದಪಾರಾಯಣ ಕಾರ್ಯಕ್ರಮ ಇಂದಿನಿಂದ (ಆಗಸ್ಟ್ 1) ಆರಂಭಗೊಂಡಿದ್ದು, ಆಗಸ್ಟ್ 5ರವರೆಗೆ ನಡೆಯಲಿದೆ.
ಲೋಕದ ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಆಯೋಜಿಸಲಾಗಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿದಿನ ವೇದಘೋಷದೊಂದಿಗೆ ವಿಶೇಷ ಪೂಜೆ, ವೇದಪಾರಾಯಣ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.
ಈ ಪುಣ್ಯಮಯ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ರಾಮನಾಥೇಶ್ವರ ದೇವರ ದರ್ಶನ ಪಡೆದು ಆಶೀರ್ವಾದಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯವರು ಭಕ್ತರಲ್ಲಿ ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



