ಟಿ.ಎಂ.ಎಸ್ ಎದುರು ಇಂದಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ

Mar 13, 2026 - 08:31
 0  76
ಟಿ.ಎಂ.ಎಸ್ ಎದುರು ಇಂದಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ

ಆಪ್ತ ನ್ಯೂಸ್ ಯಲ್ಲಾಪುರ:
ಪಟ್ಟಣದ ಬಸ್ ನಿಲ್ದಾಣ ಸರ್ಕಲ್ ನಲ್ಲಿ ಗುರುವಾರ ನಡೆದ ರಸ್ತೆ ತಡೆ ಚಳುವಳಿಯಲ್ಲಿ ಸಹಕಾರಿ ಸಂಘಗಳ  ಹಿರಿಯ ಅಧಿಕಾರಿಗಳು ಆಡಳಿತಾಧಿಕಾರಿಗಳನ್ನು ಸಂಜೆ ಒಳಗೆ ವಾಪಸ್ ಕರೆಸಿಕೊಳ್ಳುವ ಭರವಸೆಯನ್ನು ಸತ್ಯಾಗ್ರಹಿಗಳ ಎದುರು  ತಿಳಿಸಿದ್ದರು. ಆದರೆ ತಡರಾತ್ರಿಯವರೆಗೂ ಯಾವುದೇ ಅಧಿಕೃತ ಸೂಚನೆ ಬಾರದ ಹಿನ್ನೆಲೆಯಲ್ಲಿ ಈ ಮೊದಲೇ ಘೋಷಣೆ ಮಾಡಿರುವಂತೆ ಮಾ ೧೩ ಶುಕ್ರವಾರ ಬೆಳಿಗ್ಗೆ ೧೦.೩೦ ರಿಂದ  ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಬಿಸುವುದಾಗಿ  ಟಿ.ಎಂ.ಎಸ್ ಉಳಿಸಿ ಹೋರಾಟ ಸಮಿತಿಯ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ತಿಳಿಸಿದ್ದಾರೆ. ತಮ್ಮ ಜೊತೆ ಉಳಿದವರೂ ಪಾಲ್ಗೊಳ್ಳಬಹುದೆಂದು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0