ನವರಾತ್ರಿ ಎಂದರೆ ಮನರಂಜನೆಯಲ್ಲ. ಅದು ದೇವಿಯ ಆರಾಧನೆ: ರಾಮಚಂದ್ರಾಪುರ ಶ್ರೀ

ಜನವರಿ ,ಫೆಬ್ರವರಿ, ಒಂದು ಎರಡು ದಿನಾಂಕದ ಆಧುನಿಕ ಪದ್ದತಿಗೆ ವೈಜ್ಞಾನಿಕ ಅರ್ಥವೂ ಇಲ್ಲ, ಖಗೋಳದ ಬೆಂಬಲವೂ ಇಲ್ಲ. ಆದರೆ ತಿಥಿ, ಮಾಸಗಳಿಗೆ ಪ್ರಕೃತಿ ಸಹಜತೆ ಕಂಡು ಬರಿದೆ. ಉದಾಹರಣೆ ಹುಣ್ಣಿಮೆ ಎನ್ನುವ ತಿಥಿಗೆ ಆಕಾಶ ತೋರಿದರೆ ಅಲ್ಲಿ ಗೋಚರವಾಗಲಿದೆ ಇದು ಪ್ರತಿ ತಿಥಿಗೂ ಹಾಗೆ ಆಯಾ ಮಾಸಗಳಲ್ಲಿ ಪ್ರಕೃತಿಯ ಬದಲಾವಣೆಗಳನ್ನು ತಿಳಿಸುವ  ವೈಜ್ಞಾನಿಕ ನಿಜವಿದೆ ಭಾರತೀಯ  ತಿಥಿ ಮಾಸಾದಿಗಳು ವೈಜ್ಞಾನಿಕ ಹಾಗೂ ಪ್ರಕೃತಿ ಸಹಜ: ರಾಘವೇಶ್ವರ ಸ್ವಾಮೀಜಿ

Sep 27, 2025 - 19:47
Sep 27, 2025 - 21:25
 0  35
ನವರಾತ್ರಿ ಎಂದರೆ ಮನರಂಜನೆಯಲ್ಲ. ಅದು ದೇವಿಯ ಆರಾಧನೆ: ರಾಮಚಂದ್ರಾಪುರ ಶ್ರೀ

ಆಪ್ತ ನ್ಯೂಸ್ ಸಾಗರ:

ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆಅವರ ನಾಮ ಜಪಿಸಿದರೆ ಅದಕ್ಕಿಂತ ಪುಣ್ಯ ಬೇರೊಂದಿಲ್ಲ ಎಂದು ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ಸಾಗರದ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು.
ಮನುಷ್ಯನಿಗೆ ಅಂತಹ ಪುಣ್ಯ ಸಂಪಾದನೆ ಮಾಡಿಕೊಳ್ಳುವುದಕ್ಕಾಗಿಯೇ ನವರಾತ್ರಿ ಶ್ರೇಷ್ಟ ಕಾಲ. ಹಾಗಾಗಿ ಇದು ಪೂರ್ಣ ದೇವಿಯ ಆರಾಧನೆಯ ಸಮಯವೇ ಹೊರತು ಮನರಂಜನೆಯ ಸಮಯವಲ್ಲ ಎಂದರು.

ಆಧುನಿಕ ಪದ್ಧತಿ ವೈಜ್ಞಾನಿಕವೂ ಅಲ್ಲ ಖಗೋಳದ ಬೆಂಬಲವೂ ಇಲ್ಲ. 
ಜನವರಿ ,ಫೆಬ್ರವರಿ,... ಒಂದು, ಎರಡು ದಿನಾಂಕದ ಆಧುನಿಕ ಪದ್ದತಿಗೆ ವೈಜ್ಞಾನಿಕ ಅರ್ಥವೂ ಇಲ್ಲ, ಖಗೋಳದ ಬೆಂಬಲವೂ ಇಲ್ಲ. ಆದರೆ ಹಿಂದೂ ಪದ್ಧತಿಯ ತಿಥಿ, ಮಾಸಗಳಿಗೆ ಪ್ರಕೃತಿ ಸಹಜತೆ ಕಂಡು ಬರುತ್ತದೆ. ಉದಾಹರಣೆ ಹುಣ್ಣಿಮೆ ಎನ್ನುವ ತಿಥಿಗೆ ಆಕಾಶ ತೋರಿದರೆ ಗೋಚರವಾಗಲಿದೆ. ಪ್ರತಿ ತಿಥಿಗೂ, ಆಯಾ ಮಾಸಗಳಲ್ಲಿ ಪ್ರಕೃತಿಯ ಬದಲಾವಣೆ ತಿಳಿಸುವ  ವೈಜ್ಞಾನಿಕ ನಿಜಾರ್ಥವಿದೆ. ಪ್ರತಿ ತಿಥಿ, ನಕ್ಷತ್ರಗಳಲ್ಲಿ ದೈವಿ ಸ್ವರೂಪ ಇದೆ. ಅದನ್ನು ನಿತ್ಯ ಗಮನಿಸಿದರೆ ಪೂರ್ವಜರು ತಿಳಿಸಿರುವ ವಿಧಾನದ ಸತ್ಯ ಅರಿವಾಗಲಿದೆ. ಅಂತಹ ಪ್ರಕೃತಿ ಸಹಜತೆಯ ವಿಧಾನ ಮರೆತು ವೈಜ್ಞಾನಿಕವಲ್ಲದ ಮೌಡ್ಯ ಅನುಸರಿಸುತ್ತಿರುವುದು ಬೇಸರದ ಸಂಗತಿ ಎಂದರು.
ಇದಕ್ಕೂ ಮುನ್ನ ನವರಾತ್ರ ನಮಸ್ಯಾ ಸಮಿತಿಯಿಂದ  ಕೊಡ ಮಾಡಿದ ಸಮಾಜ ಗೌರವವನ್ನು ಗುಡಿಗಾರ ಸಮಾಜ, ಮಡಿವಾಳ ಸಮಾಜ, ಹಸಲರ ಸಮಾಜ, ವೀರಶೈವ ಸಮಾಜ, ಬಲಿಜ ಸಮಾಜ, ಬಾಹುಸಾರ ಕ್ಷತ್ರಿಯ ಸಮಾಜ, ಹಾಗೂ ಉಪ್ಪಾರ ಸಮಾಜಕ್ಕೆ ಕೊಡಲಾಯಿತು. ಆಯಾ ಸಮಾಜದ ಪರವಾಗಿ ಅಧ್ಯಕ್ಷರಾದ ಅಣ್ಣಪ್ಪ ಗುಡಿಗಾರ, ಕೊಟ್ರಪ್ಪ, ಮಲ್ಲೇಶಪ್ಪ, ಕೆ.ವಿ. ಪ್ರವೀಣ್, ಸತೀಶ, ರವಿ ಮಹೇಂದ್ರಕರ್, ಮಲ್ಲೇಶಪ್ಪ ಗೌರವ ಸ್ವೀಕರಿಸಿದರು.
ನವರಾತ್ರ ನಮಸ್ಯಾ ಸಮಿತಿಯ ಪ್ರಧಾನ ಸಂಚಾಲಕ ಮುರಳಿ ಗೀಜಗಾರು, ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ, ಶ್ರೀಮಠದ ವಿತ್ತಾಧ್ಯಕ್ಷ ಜಿ.ಎಲ್. ಗಣೇಶ್, ಮಾಧ್ಯಮ ಶ್ರೀಸಂಯೋಜಕ ಸಂದೇಶ ತಲಕಾಲಕೊಪ್ಪ, ಹವ್ಯಕ ಮಂಡಲದ ಪ್ರಮುಖರಾದ ಗಣಪತಿ ಬೇದೂರು, ವಿ.ಜಿ. ಹೆಗಡೆ, ಕೆ.ಆರ್. ಗೋಪಾಲ, ತೀರ್ಥಹಳ್ಳಿ ಮಠದ ಸಮಿತಿ ಅಧ್ಯಕ್ಷ ಕಾರ್ತಿಕ್, ಮಹಾಮಂಡಲದ ಪ್ರಧಾನ ರಮೇಶ್ ಹೆಗಡೆ ಗುಂಡೂಮನೆ, ಶ್ರೀನಾಥ ಸಾರಂಗ, ಎಂ.ಜಿ. ರಾಮಚಂದ್ರ, ಗೌತಮ ಮತ್ತಿತರರು ಇದ್ದರು. 
ಇದಕ್ಕೂ ಮುನ್ನ ಬೆಳಗ್ಗೆ ಲಲಿತಾ ಹವನಧೂಮ್ರಹಾ ಉಪಾಸನೆಜಯದುರ್ಗ ಮೂಲಮಂತ್ರ ಹವನಚಂಡಿಕಾ ಹವನಶ್ರೀಪೂಜೆಕುಂಕುಮಾರ್ಚನೆಉಡಿ ಹಾಗೂ ಸ್ತೋತ್ರ ಸಮರ್ಪಣೆಸುವರ್ಣ ಪಾದುಕಾ ಪೂಜೆ, ಭಜನೆ, ಲಲಿತಾ ಅಷ್ಟೋತ್ತರ ನಡೆಯಿತು. ಸಂಜೆ ದುರ್ಗಾದೀಪ ನಮಸ್ಕಾರ, ರಾಜರಾಜೇಶ್ವರಿ ಪೂಜೆ ಹಾಗೂ ಚಂಡಿಕಾ ಪಾರಾಯಣ ನೆರವೇರಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0