ಪಾದಯಾತ್ರೆ ಹಾಗೂ ಅನಿರ್ದಿಷ್ಟ ಕಾಲ ಹಗಲು-ರಾತ್ರಿ ಧರಣಿ ಸತ್ಯಾಗ್ರಹ

Nov 6, 2025 - 10:53
 0  22
ಪಾದಯಾತ್ರೆ ಹಾಗೂ ಅನಿರ್ದಿಷ್ಟ ಕಾಲ ಹಗಲು-ರಾತ್ರಿ ಧರಣಿ ಸತ್ಯಾಗ್ರಹ

ಆಪ್ತ ನ್ಯೂಸ್ ಜೋಯಿಡಾ:

ತಾಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅತಿ ಹಿಂದುಳಿದ ತಾಲೂಕು ಜೋಯಿಡಾ ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ,13 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ನವೆಂಬರ್ 10ರ ಬೆಳಿಗ್ಗೆ 10.00 ಗಂಟೆಗೆ ಕಿರವತ್ತಿಯಿಂದ ಪಾದಯಾತ್ರೆಯ ಮುಖಾಂತರ ಆಗಮಿಸಿ ತಹಶೀಲ್ದಾರ ಕಚೇರಿ ಎದುರು ಹಗಲು -ರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿಯನ್ನು ಒಳಗೊಂಡ ಪತ್ರವನ್ನು ಜೋಯಿಡಾ ತಹಶೀಲ್ದಾರ ಅವರಿಗೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಅಧ್ಯಕ್ಷ ಪ್ರೇಮಾನಂದ ವೇಳಿಪ, ತಾಲೂಕಾ ಕಾರ್ಯದರ್ಶಿ ರಾಜೇಶ ಗಾವಡಾ, ದೀಪಕ ವೇಳಿಪ, ದೀಲಿಪ ವೇಳಿಪ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0