ಬೇಡ್ತಿ-ಅಘನಾಶಿನಿ ಯೋಜನೆ ವಿರುದ್ಧದ ಸಮಾವೇಶಕ್ಕೆ ಬನ್ನಿ: ಸ್ವರ್ಣವಲ್ಲಿ ಸ್ವಾಮೀಜಿ ಕರೆ
ಪಶ್ಚಿಮ ಘಟ್ಟದ ನದೀ ಕಣಿವೆಗಳಿಗೆ ಮಾರಕವಾದ ಬೇಡ್ತಿ-ಅಘನಾಶಿನಿ ನದಿಗಳ ದಿಕ್ಕು ತಿರುಗಿಸುವ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಕೂಡಲೇ ಕೈಬಿಡುವ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ ಜನವರಿ ೧೧ ರಂದು ಶಿರಸಿಯಲ್ಲಿ ಬೃಹತ್ ಜನ ಸಮಾವೇಶ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಜನಸಾಮಾನ್ಯರು ಆಗಮಿಸುವಂತೆ ಬೇಡ್ತಿಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷರು, ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಕರೆ ನೀಡಿದ್ದಾರೆ.
ಉ.ಕ ಜಿಲ್ಲೆಯ ವಿವಿಧ ಮಠಾಧೀಶರು ನಮ್ಮ ಅಹವಾಲಿಗೆ ಧ್ವನಿಗೂಡಿಸಲು ಜನವರಿ ೧೧ ರ ಸಮಾವೇಶದಲ್ಲಿ ಸಾಂನಿಧ್ಯ ನೀಡಲಿದ್ದಾರೆ. ಸೋಂದಾ, ಶ್ರೀ ಶ್ರೀಮದ್ ಮಾಧವಾನಂದ ಭಾರತೀ ಮಹಾಸ್ವಾಮಿಗಳು ಶ್ರೀಸಂಸ್ಥಾನ ಶ್ರೀಮನ್ನೆಲೆಮಾವು ಮಠ, ಪ.ಪೂ. ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀ ಕ್ಷೇತ್ರ ಸೋದೇ ಶ್ರೀವಾದಿರಾಜ ಮಠ, ಸೋಂದಾ, ಪ.ಪೂ. ಸ್ವಸ್ತಿಶ್ರೀ ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಸ್ವಾದೀ ದಿಗಂಬರ ಜೈನ ಮಠ, ಸೋಂದಾ, ಮ.ನಿ.ಪ್ರ. ಡಾ. ಮಹಾಂತ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಸಂಸ್ಥಾನ ಮಠ, ಜಡೆ, ತಾ: ಸೊರಬ ಪ.ಪೂ. ಶ್ರೀ ಶ್ರೀ ಬ್ರಹ್ಮಾನಂದ ಭಾರತೀ ಮಹಾಸ್ವಾಮಿಗಳು ಶ್ರೀ ಚೈತನ್ಯ ರಾಜಾರಾಮ ಅಶ್ರಮ, ಶಿರಳಗಿ, ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೇಡ್ತಿಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಟಿಎಂಎಸ್ ಅಧ್ಯಕ್ಷ ಜಿ ಟಿ ಹೆಗಡೆ ತಟ್ಟೀಸರ, ಜಿಎಂ ಹೆಗಡೆ ಮುಳಖಂಡ, ಮಠದ ಅಧ್ಯಕ್ಷ ವಿ ಎನ್ ಹೆಗಡೆ ಬೊಮ್ನಳ್ಳಿ ಮತ್ತಿತರರು ಇದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0



