ಶಿರಸಿ–ಮುಂಡಗೋಡ–ಸೌವದತ್ತಿ ನೂತನ ಬಸ್ ಸೇವೆಗೆ ಚಾಲನೆ; ಶಾಸಕ ಶಿವರಾಮ ಹೆಬ್ಬಾರರಿಂದ ಹಸಿರು ನಿಶಾನೆ
ಆಪ್ತ ನ್ಯೂಸ್ ಮುಂಡಗೋಡ:
ಧಾರ್ಮಿಕ ಕ್ಷೇತ್ರ ಸೌವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಭಕ್ತರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರ ಅನುಕೂಲಕ್ಕಾಗಿ "ಶಿರಸಿ–ಮುಂಡಗೋಡ–ಸೌವದತ್ತಿ" ನೂತನ ಸಾರಿಗೆ ಬಸ್ ಸೇವೆಗೆ ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಧಿಕೃತ ಚಾಲನೆ ನೀಡಲಾಯಿತು.
ಶಾಸಕ ಶಿವರಾಮ ಹೆಬ್ಬಾರ ಹಸಿರು ನಿಶಾನೆ ತೋರಿಸುವ ಮೂಲಕ ಬಸ್ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹೊಸ ಬಸ್ ಸೇವೆಯಿಂದ ಶಿರಸಿ, ಮುಂಡಗೋಡ ಹಾಗೂ ಸೌವದತ್ತಿ ಮಾರ್ಗದ ಪ್ರಯಾಣಿಕರಿಗೆ ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದ್ದು, ವಿಶೇಷವಾಗಿ ಯಲ್ಲಮ್ಮ ದೇವಿಯ ದರ್ಶನಕ್ಕೆ ತೆರಳುವ ಸಾವಿರಾರು ಭಕ್ತರಿಗೆ ಇದು ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಾರ್ವಜನಿಕರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಆರಂಭಿಸಿರುವ ಈ ಬಸ್ ಸೇವೆಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ನೂತನ ಬಸ್ ಸೇವೆ ಆರಂಭಗೊಂಡಿರುವುದಕ್ಕೆ ಸ್ಥಳೀಯರು ಹಾಗೂ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು, ಈ ಮಾರ್ಗದಲ್ಲಿ ಇನ್ನಷ್ಟು ಸಾರಿಗೆ ಸೌಲಭ್ಯಗಳನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



