ನಿಲ್ಲಿಸಿ ನಿಲ್ಲಿಸಿ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲ್ಲಿಸಿ
ಆಪ್ತ ನ್ಯೂಸ್ ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ ಸದಸ್ಯ ಆರ್.ಎಸ್.ಭಟ್ಟ ನೇತೃತ್ವದಲ್ಲಿ ವಾ.ಕ.ರಾ.ರ.ಸಾ ಸಂಸ್ಥೆಯ ಘಟಕ ವ್ಯವಸ್ಥಾಪಕರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಯಲ್ಲಾಪುರ-ಶಿರಸಿ ಮಾರ್ಗದ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಶಾಲೆ-ಕಾಲೇಜು ತಲುಪಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗ್ಗೆ ಹಲವು ಬಾರಿ ಸಂಬಂದಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಬೆಳಿಗ್ಗೆ 8.30 ರಿಂದ 9.15 ಕ್ಕೆ ಹಾಗೂ ಸಂಜೆಯ ವೇಳೆಗೆ 4.45 ರಿಂದ 5.30 ರ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಇರುವ ಬಸ್ ಗೆ ಹುತ್ಕಂಡ ಕ್ರಾಸ್ ನಲ್ಲಿ ನಿಲುಗಡೆ ನೀಡಬೇಕು. ಅಕ್ಟೋಬರ್ 27ರ ಒಳಗೆ ಸರಿಪಡಿಸದಿದ್ದಲ್ಲಿ ಹುತ್ಕಂಡ ಕ್ರಾಸ್ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಲಾಗುವುದೆಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



