ಉಳವಿ ಯಾತ್ರೆಗೆ ಹೊರಟಿದ್ದ ಯುವಕನ ಬೈಕ್‌ ಅಪಘಾತ: ಸಾವು

Jul 25, 2026 - 16:40
 0  177
ಉಳವಿ ಯಾತ್ರೆಗೆ ಹೊರಟಿದ್ದ ಯುವಕನ ಬೈಕ್‌ ಅಪಘಾತ: ಸಾವು

ಆಪ್ತ ನ್ಯೂಸ್ ದಾಂಡೇಲಿ:

ದೇವರ ದರ್ಶನದ ಆಶಯದೊಂದಿಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಳವಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಸಂಭವಿಸಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಪ್ರಸಾದ್ ರಾಘವೇಂದ್ರ ಹುಲ್ಕುಂದ (22) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಪ್ರಸಾದ್ ಅವರು ಉಳವಿ ದೇವಸ್ಥಾನದ ದರ್ಶನಕ್ಕಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಹಳಿಯಾಳ–ದಾಂಡೇಲಿ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಸಮೀಪ ಬೈಕ್ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಪರಿಸ್ಥಿತಿ ಗಂಭೀರವಾಗಿತ್ತು.

ಅಪಘಾತವನ್ನು ಕಂಡ ಸ್ಥಳೀಯರು ಕೂಡಲೇ ಮಾನವೀಯತೆ ಮೆರೆದು ಗಾಯಾಳುವನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಸ್ಪತ್ರೆಗೆ ತಲುಪುವ ಮೊದಲುವೇ ಪ್ರಸಾದ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ದೇವರ ದರ್ಶನದ ಭಕ್ತಿಭಾವದೊಂದಿಗೆ ಆರಂಭವಾದ ಯುವಕನ ಪಯಣ ದುರಂತದಲ್ಲಿ ಅಂತ್ಯಗೊಂಡಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕ ಮೂಡಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0